ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ – ಸಮಾರೋಪ ಸಮಾರಂಭ

ಪದವಿ ಪೂರ್ವ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಮತ್ತು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇದರ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಕೆವಿಜಿ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಆಯೋಜನೆಗೊಂಡಿತ್ತು. ಹುಡುಗಿಯರ ವಿಭಾಗದಲ್ಲಿ ಎಸ್ ಎಸ್ ಪಿ ಯು ಕಾಲೇಜು ಸುಬ್ರಹ್ಮಣ್ಯ ಹಾಗು ಹುಡುಗರ ವಿಭಾಗದಲ್ಲಿ ಎನ್ನೆಮ್ ಪಿಯುಸಿ ಅರಂತೋಡು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. ವೈಯಕ್ತಿಕ ವಿಭಾಗದಲ್ಲಿ ಚಾಂಪಿಯನ್ ಆಗಿ ಹುಡುಗಿಯರ ವಿಭಾಗದಲ್ಲಿ ಎನ್ನೆಮ್ ಪಿಯುಸಿ ಅರಂತೋಡು ಇಲ್ಲಿನ ರಚನಾ ಡಿ ಯು ಪಡೆದರೆ, ಹುಡುಗರ ವಿಭಾಗದಲ್ಲಿ ಅದೇ ಕಾಲೇಜಿನ ಮೊಹಮ್ಮದ್ ಅರ್ಷದ್ ಚಾಂಪಿಯನ್ ಆಗಿ ಹೊರಹೊಮ್ಮಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪದವಿ   ಕಾಲೇಜು ಇಲ್ಲಿನ ನಿವೃತ್ತ  ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ರಾಧಾಕೃಷ್ಣ ಮಾಣಿಬೆಟ್ಟು ಇವರು ಪ್ರಶಸ್ತಿ ವಿತರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂತೆಯ ಪ್ರಾಂಶುಪಾಲರು  ಶ್ರೀಮತಿ ಹರಿಣಿ ಪುತ್ತೂರಾಯ , ದೈಹಿಕ ನಿರ್ದೇಶಕರಾದ ಶ್ರೀ ಸೀತಾರಾಮ ಎಂ. ಡಿ , ಕೆವಿಜಿ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಕಚೇರಿ ಅಧೀಕ್ಷಕ ಶ್ರೀ ವಿಶ್ವನಾಥ ಮತ್ತು ದೈಹಿಕ ನಿರ್ದೇಶಕರಾದ ಶ್ರೀ ನಾಗರಾಜ್ ಉಪಸ್ಥಿತರಿದ್ದರು.